Saturday 25 October 2014

dhammapada/yamaka vagga/1:5/kosambi monks

ಯೋಗ್ಯ ಚಿಂತನೆಯಿಂದ ಯುದ್ಧಗಳು (ಜಗಳ) ನಿಲ್ಲುತ್ತವೆ
ಪರರು ತಾವು ಸಾವಿನ ವಶವಾಗುತ್ತೇವೆ ಎಂದು ಅರಿತಿಲ್ಲ. ಯಾರು ಇದನ್ನು ಅರಿತಿರುವರೋ ಅವರ ಜಗಳಗಳು ಶಮನಗೊಳ್ಳುತ್ತವೆ    (6)
ಗಾಥ ಪ್ರಸಂಗ 1:5
ಕೋಸಂಬಿಯ ಕಲಹಪ್ರಿಯ ಭಿಕ್ಷುಗಳು

                ಕ್ಷುಲ್ಲಕ ಕಾರಣದಿಂದ ಕೋಸಂಬಿಯ ಭಿಕ್ಷುಗಳಲ್ಲಿ ದುಭರ್ಾಗ್ಯಯುತ ಕಲಹ ಹಬ್ಬಿತು. ವಿನಯದ ಗುರುವಿನ ಗುಂಪಿಗೂ ಧಮ್ಮದ ಗುರುವಿನ ಗುಂಪಿಗೂ ವಿನಯದ ಚಿಕ್ಕ ನಿಯಮದ ಕಾರಣಕ್ಕಾಗಿ ಕಲಹ ಉಂಟಾಯಿತು. ಅವರು ಬುದ್ಧರ ಬುದ್ಧಿವಾದವನ್ನು ಕೇಳಲಿಲ್ಲ. ಆದರೆ ಬುದ್ಧರಿಗೆ ಅವರು ನಿಧಾನವಾಗಿ ಸರಿಹೋಗುತ್ತಾರೆಂದು ತಿಳಿದಿತ್ತು. ಅಂತಹ ಪರಿಸ್ಥಿತಿ ಉಂಟುಮಾಡಲು ಅವರು ಕೋಸಂಬಿಯನ್ನು ಬಿಟ್ಟು ಕಾಡಿನತ್ತ ಹೋಗಿ ವಷರ್ಾವಾಸ ಕಳೆದರು. ಅಲ್ಲಿ ಅವರಿಗೆ ಆನೆ ಮತ್ತು ಕಪಿಯೊಂದು ಸೇವೆಮಾಡಿತು. ಆನೆಯೊಂದು ಬಂದು ಭಗವಾನರಿಗೆ ಸೇವೆ ಸಲ್ಲಿಸುತ್ತಿರುವುದನ್ನು ಕಪಿಯು ಕಂಡಿತು. ಅದೂ ಸಹಾ ಭಗವಾನರಿಗೆ ದಾನ ನೀಡಲು ಇಚ್ಛಿಸಿತು. ಅದು ಮರದಿಂದ ಮರಕ್ಕೆ ಹಾರಿ ಜೇನನ್ನು ಕಿತ್ತು ಬುದ್ಧರಿಗೆ ನೀಡಿತು. ಹಾಗು ಬುದ್ಧರು ಜೇನನ್ನು ತಿಂದರೋ ಅಥವಾ ಇಲ್ಲವೋ ಎಂದು ಪರೀಕ್ಷಿಸಿತು. ಅವರು ಸೇವಿಸದೆ ಇದ್ದಾಗ ಅದು ಹತ್ತಿರ ಬಂದು ಜೇನನ್ನು ಪರೀಕ್ಷಿಸಿ ಅದರಲ್ಲಿದ್ದ ಜೇನಿನ ಎಲ್ಲಾ ಮೊಟ್ಟೆಗಳನ್ನು ನಯವಾಗಿ ತೆಗೆದು ಮತ್ತೆ ಬುದ್ಧರಿಗೆ ಸಮಪರ್ಿಸಿತು. ಈ ಸಾರಿ ಬುದ್ಧರು ಸೇವಿಸಿದಾಗ ಅದು ಸಂತೋಷಿಸಿತು.
                ಗೃಹಸ್ಥರಿಗೆ ಬುದ್ಧರು ನಾಡಿನಲ್ಲಿ ಇಲ್ಲದಿರುವ ಕಾರಣ ತಿಳಿಯಿತು. ಅವರು ಭಿಕ್ಷುಗಳಿಗೆ ಆಹಾರ ದಾನ ನೀಡಲು ನಿರಾಕರಿಸಿದರು. ಆಗ ಭಿಕ್ಷುಗಳಿಗೆ ತಮ್ಮ ತಪ್ಪಿನ ಅರಿವಾಯಿತು. ಅವರು ಪಶ್ಚಾತ್ತಾಪಪಟ್ಟರು ಮತ್ತೆ ಒಂದಾದರು. ಆದರೂ ಸಹಾ ಕೋಸಂಬಿಯ ಉಪಾಸಕರು ಭಿಕ್ಷುಗಳಿಗೆ ಆಹಾರವನ್ನು ನೀಡಲಿಲ್ಲ, ಸತ್ಕರಿಸಲಿಲ್ಲ. ಏಕೆಂದರೆ ಅವರಿಗೆ ಬುದ್ಧರು ಬೇಕಾಗಿತ್ತು. ಬುದ್ಧರ ಬಳಿ ಭಿಕ್ಷುಗಳು ಕ್ಷಮೆಯಾಚಿಸಬೇಕಾಗಿತ್ತು. ಹೀಗೆ ಆ ವರ್ಷವಾಸವನ್ನು ಭಿಕ್ಷುಗಳು ಅತಿ ದುದರ್ೆಸೆಯಿಂದ ಕಳೆದರು.

                ವರ್ಷವಾಸದ ಕೊನೆಯಲ್ಲಿ ಆನಂದ ಮತ್ತಿತರ ಹಿರಿಯ ಭಿಕ್ಷುಗಳು ಕೋಸಂಬಿಯ ಭಿಕ್ಷುಗಳು ಬದಲಾಗಿರುವುದನ್ನು, ಕ್ಷಮೆ ಯಾಚಿಸಿರುವುದನ್ನು ತಿಳಿಸಿದರು. ನಂತರ ಭಗವಾನರು ಶ್ರಾವಸ್ಥಿಗೆ ಹಿಂತಿರುಗಿದರು. ಅಲ್ಲಿ ಭಿಕ್ಷುಗಳು ಬಂದು ಕ್ಷಮೆ ಯಾಚಿಸಿದರು. ಆಗ ಭಗವಾನರು ಮೇಲಿನ ಗಾಥೆಯನ್ನು ತಿಳಿಸಿದರು. 

No comments:

Post a Comment